Home ಅಪರಾಧಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು: ಭದ್ರಾವತಿಯಲ್ಲಿ ಡಕಾಯಿತಿಗೆ ಯತ್ನಿಸಿದ್ದ ರೌಡಿಶೀಟರ್..!!

ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು: ಭದ್ರಾವತಿಯಲ್ಲಿ ಡಕಾಯಿತಿಗೆ ಯತ್ನಿಸಿದ್ದ ರೌಡಿಶೀಟರ್..!!

ಭದ್ರಾವತಿಯ ಪೊಲೀಸರ ಕಾರ್ಯಾಚರಣೆ..

by Editor

ಸಂಜೆ 07.00 ಗಂಟೆಯಿಂದ 07.15 ಗಂಟೆ ಸುಮಾರಿಗೆ ಡಿಚ್ಚಿ ಮುಬಾರಕ್ ತನ್ನ ಸಹಚರರೊಂದಿಗೆ ದರೋಡೆ ಮಾಡಲು
ಹೊಂಚು ಹಾಕುತ್ತಿರುವುದು ಕಂಡು ಬಂದ ಮೇರೆಗೆ ಅವರುಗಳನ್ನು ವಶಕ್ಕೆ ಪಡೆಯಲು ಹೋದಾಗ ಡಿಚ್ಚಿ ಮುಬಾರಕ್ ಮತ್ತು ಆತನ ಸಹಚರರು ಕಲ್ಲು ಮತ್ತು ಚಾಕುಗಳಿಂದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ಪಿಎಸ್ಸೈ ಸಿದ್ದಪ್ಪರವರ ಕಾಲಿನ ಮೂಳೆ
ಮುರಿದಿರುತ್ತದೆ. ಹಾಗು ಚಾಕುವಿನಿಂದ ಕೈಗೆ ಚುಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ್ದು,
ರಕ್ತಗಾಯವಾಗಿರುತ್ತದೆ. ಕೃಷ್ಣಕುಮಾರ್ ಬಿ.ಮಾನೆ ಪಿಎಸ್‌ಐರವರ ಕೈ ಬೆರಳು ಮುರಿದಿರುತ್ತದೆ. ಮತ್ತು ಸಿಹೆಚ್‌ ಆದರ್ಶ ರವರ ಕಾಂಗೆ ಗಾಯವಾಗಿರುತ್ತದೆ. ಈ ಸಂದರ್ಭ ಕೃಷ್ಣಕುಮಾರ್ ಬಿ ಮಾನೆರವರು ಡಿಚ್ಚಿ ಮುಬಾರಕ್ ಗೆ ಶರಣಾಗುವಂತೆ ಸೂಚಿಸಿದರೂ ಕೇಳದೇ ಅವರ ಮೇಲೆ ಮತ್ತೆ ಹಲ್ಲೆಗೆ ಮುಂದಾದಾಗ ಪಿಎಸ್‌ಐರವರು ತನ್ನ ಬಳಿಯಿದ್ದ ಸರ್ವೀಸ್ ಪಿಸ್ತೂಲ್ ನಿಂದ ಗಾಳಿಯಲ್ಲಿ ಒಂದು ಸುತ್ತು
ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿರುತ್ತಾರೆ.ಆದರೂ ಸಹ ಡಿಜ್ಜೆ ಮುಬಾರಕ್ ಮತ್ತೆ ನಿಮ್ಮನ್ನು ಉಳಿಸುವುದಿಲ್ಲವೆಂದು ಹೇಳಿ ತನ್ನ ಬಳಿಯಿದ್ದ ಚಾಕುವಿನಿಂದ ಚುಚ್ಚಲು ಬಂದಾಗ ಪಿಎಸ್‌ಐ ರವರು ಆತ್ಮರಕ್ಷಣೆಗಾಗಿ ಡಿಚ್ಚಿ ಮುಬಾರಕ್ ನ ಕಾಲಿಗೆ ಗುಂಡು ಹಾರಿಸಿರುತ್ತಾರೆ. ಇದರಿಂದ ಡಿಚ್ಚಿ ಮುಬಾರಕ್
ಗಾಯಗೊಂಡಿರುತ್ತಾನೆ. ಕೂಡಲೇ ಆತನನ್ನು ಚಿಕಿತ್ಸೆಗಾಗಿ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿರುತ್ತಾರೆ. ಅಧಿಕಾರಿಗಳನ್ನು ಸಹ ಚಿಕಿತ್ಸೆಗಾಗಿ ಭದ್ರಾವತಿ ಸರ್ಕಾರಿ
ಆಸ್ಪತ್ರೆಗೆ ಸೇರಿಸಲಾಗಿರುತ್ತದೆ.
ಡಿಚ್ಚಿ ಮುಬಾರಕ್‌ನ ಜೊತೆಗಿದ್ದ ಸಹಚರರಾದ ಜಹೀರ್, ರೆಹಮತ್ ಪಾಷಾ, ಜುನೈದ್, ಮತ್ತು
ಮನುಸಿಂಗ್‌ ಅವರುಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ.

You may also like

Leave a Comment

ಸಮಾಜಸೇವಾ ಕಾರ್ಯಕರ್ತೆ ಕಲಾವಿದೆ ಕೆ.ಹೆಚ್.ಸುಮಿತ್ರ ಸುಮಗೆ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಯ ಗರಿ ಸಾಧನೆಯ ಹೆಜ್ಜೆಗುರುತು.   Big News: ಹೊಸನಗರದಲ್ಲಿ ಅಕ್ರಮ ಭೂ ಮಂಜೂರಾತಿ: ತಹಶೀಲ್ದಾರ್-ಕ್ಲರ್ಕ್‍ಗಳೇ ನೇರ ಶಾಮೀಲು..!? ಕಾಸು ಕೊಟ್ಟರೆ ಯಾರಿಗೆ ಬೇಕಾದರೂ ಸರ್ಕಾರಿ ಜಾಗ ಬರೆದುಕೊಡುತ್ತಾರಂತೆ..!? ಕಂದಾಯ ಸಚಿವರೇ ಇತ್ತ ಗಮನಿಸಿ..!   ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು: ಭದ್ರಾವತಿಯಲ್ಲಿ ಡಕಾಯಿತಿಗೆ ಯತ್ನಿಸಿದ್ದ ರೌಡಿಶೀಟರ್..!!   ಮಧ್ಯಮ ವರ್ಗ ಮತ್ತು ಸಣ್ಣ ಹೂಡಿಕೆದಾರರಿಗೆ ಬೆಳವಣಿಗೆಗೆ ಅವಕಾಶ: ನಿರ್ಮಲಾ ಸೀತಾರಾಮನ್   ರಕ್ಷಣಾ ಇಲಾಖೆಗೆ ಗಣನೀಯ ನಿಧಿ: ಕೇಂದ್ರ ಬಜೆಟ್‌ನಲ್ಲಿನಿರ್ಮಲಾ ಸೀತಾರಾಮನ್